ಹಲೋ ಸ್ನೇಹಿತರೇ ನಮಸ್ಕಾರ, ಆಸ್ತಿ ನೋಂದಣಿಯಾದ 7 ದಿನದ ಒಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿಯನ್ನು ಬದಲಾವಣೆಯನ್ನು ಕಡ್ಡಾಯಗೊಳಿಸುವುದು ಎಂದು ಆರ್ ಅಶೋಕ್ ಹೇಳಿದ್ದಾರೆ. ಖಾತೆ ಮಾಡಲು ಅವಕಾಶ ಕಲ್ಪಿಸುವ ಮತ್ತೊಂದು ಜನಸ್ನೇಹಿ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವರು ಹೇಳಿದ್ದಾರೆ. ಖಾತೆ ಮಾಡಲು ಅವಕಾಶ ಕಲ್ಪಿಸುವ ಮತ್ತೊಂದು ಜನಸ್ನೇಹಿ ನಿರ್ಧಾರ ಕೈಗೊಂಡಿದೆ. ನೋಂದಣಿಯಾದ ಆಸ್ತಿ ನೀಡಲು ಸದ್ಯಕ್ಕೆ 34 ದಿನಗಳ ಕಾಲ ಕಾಲವಕಾಶ ಇದೆ. ಇದನ್ನು 7 ದಿನಕ್ಕೆ ಇಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ತಿಳಿಸಿದರು.
ಆಸ್ತಿ ನೋಂದಣಿ ಮಾಡಿಸಿಕೊಂಡವರು ಖಾತೆ ಪಡೆಯಲು ತಿಂಗಳುಗಟ್ಟಲೇ ಕಛೇರಿಗೆ ಹೋಗುವುದನ್ನು ತಪ್ಪಿಸಲು ಈ ತೀರ್ಮಾನವನ್ನು ಮಾಡಲಾಗಿದೆ. ಇದರಿಂದ ಆಸ್ತಿ ಮೇಲೆ ಸೌಲಭ್ಯ ಪಡೆಯಲು ಜನರಿಂದ ಬಹಳಷ್ಟು ಅನುಕೂಲವಾಗಲಿದೆ. ರಾಜ್ಯದಲ್ಲಿ ಲಕ್ಷಾಂತರ ಕಂದಾಯ ನಿವೇಶನವನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸರ್ಕಾರದ ಮಾಹಿತಿಯನ್ನು ಮೊಬೈಲ್ನಲ್ಲಿ ನೋಡಲು
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಂದಾಯ ಜಾಗಗಳಲ್ಲಿನ ಅನದೀಕೃತ ಮನೆ, ನಿವೇಶನ ಮತ್ತಿತರ 40 ಲಕ್ಷಕ್ಕೂ ಅಧಿಕ ಆಸ್ತಿಗಳನ್ನು ಸಕ್ರಮ ಮಾಡಲು ಸರ್ಕಾರ ಹೊಸ ಮಾರ್ಗವನ್ನು ಹುಡುಕಿದೆ. ಭೂ ಪರಿವರ್ತನೆಯಲ್ಲಿ ಪಾರದರ್ಶಕತೆಯಲ್ಲಿ ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲಾಗುತ್ತಿರುವ ನೂತನ ವ್ಯವಸ್ಥೆಯಲ್ಲಿ ಕಂದಾಯ ನಿವೇಶನಗಳ ಆಸ್ತಿಗಳ ಸಕ್ರಮಕ್ಕೂ ಅನುವು ಮಾಡಿಕೊಡಲು ಸರ್ಕಾರ ಚಿಂತನೆ ಮಾಡಿದೆ.
ಯೋಜನಾ ಪ್ರಾಧಿಕಾರ ವ್ಯಾಪ್ತಿಗೆ ಒಳಪಟ್ಟ ಕೃಷಿ ಭೂಮಿ, ಕೃಷಿಯೇತರ ಚಟುವಟಿಕೆಯಲ್ಲಿ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಳ್ಳಲು ಮುಂದಾಗಿರುವ ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತದೆ. ಬೆಳಗಾವಿಯ ಅಧಿವೇಶನದಲ್ಲಿ ಈ ವಿಚಾರ ಕುರಿತು ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ. ಇದರಿಂದ ನಗರ ಹಾಗು ಗ್ರಾಮೀಣ ವಿಭಾಗದಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸಹಕಾರಿಯಾಗಲಿದೆ. ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಸಿಕೊಳ್ಳದ ಇಂತಹ ನಿವೇಶನಗಳ ಭೂ ದಂಡ ಶುಲ್ಕದೊಂದಿಗೆ ಭೂ ಪರಿವರ್ತನೆ ಸಾದ್ಯವಾದರೆ ಜನರಿಗೆ ಅನುಕೂಲವಾಗುತ್ತದೆ.
ಪ್ರಮುಖ ಲಿಂಕ್ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಡೌನ್ಲೋಡ್ App | Click Here |